ಕೊಡಗು ಚೆಂಬು:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಕುರಿತು ಪ್ರತಿಜ್ಞಾ ವಿಧಿ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಸಭಾ,ಕಾರ್ಯಕ್ರಮದಲ್ಲಿ ಗ್ರಾ.ಪಂ. ಚೆಂಬು ಇದರ ಅಧ್ಯಕ್ಷರಾದ ಶ್ರೀಯುತ ದಿನೇಶ್ ಕುಮಾರ್ ಮಾತನಾಡಿ “ದೇಶ ಕಂಡ ಮಹಾನ್ ಕಣ್ಮಣಿಗಳಾದ ಈ ಇಬ್ಬರ ಆದರ್ಶ ತತ್ವ”ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾತನಾಡಿದರು. ಹಾಗೆಯೇ ವಿದ್ಯಾಭಿಮಾನಿಗಳಾದ ಶ್ರೀಯುತ ವಾಸುದೇವ ನಿಡಿಂಜಿ ಮಾತನಾಡಿ ” ಈ ಮಹಾನ್ ವ್ಯಕ್ತಿಗಳ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಅವರ ಧ್ಯೇಯ ವಾಕ್ಯಗಳೊಂದಿಗೆ ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ನಾವೆಲ್ಲಾರು ಪಾಲ್ಗೊಳ್ಳೋಣ” ಎಂದು ಹಿತನುಡಿದರು.
ಸಭೆಯಲ್ಲಿ ಎಸ್.ಡಿ.ಎಂ ಸಿ ಅಧ್ಯಕ್ಷರು ಶ್ರೀಯುತ ಗಣೇಶ ಪಿ.ಟಿ. , ಗ್ರಾ.ಪಂ.ಚೆಂಬು ಸದಸ್ಯೆ ಶ್ರೀಮತಿ ಲೀಲಾವತಿ ಯು.ಆರ್, ಮುಖ್ಯೋಪಾಧ್ಯಾಯರಾದ ಶ್ರೀಯುತ ಸೋಮಣ್ಣ ಕೆ.ಆರ್ ಹಾಗೂ ಎಸ್.ಡಿ.ಎಂ.ಸಿ. ಸರ್ವ ಸದಸ್ಯರುಗಳು, ಶಾಲಾ ಶಿಕ್ಷಕ-ಸಿಬ್ಬಂಧಿ ವೃಂಧ ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛ ಭಾರತ – ಗಾಂಧೀ ಕನಸಿನ ಅಂಗವಾಗಿ ಶಾಲೆಯ ಸುತ್ತಾ ಮುತ್ತಾ ಶ್ರಮದಾನ ಕಾರ್ಯವನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಶ್ರೀ ವಿಕ್ರಾಂತ ಎಂ ಬಿ ಅ.ಶಿಕ್ಷಕರು ಸ್ವಾಗತಿಸಿ ನಿರೂಪಿಸಿದರು.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…