ಸರಣಿ ರಜೆಯಿಂದಾಗಿ ಕುಕ್ಕೆ ಕ್ಷೇತ್ರದಲ್ಲಿ ಭಕ್ತರ ಸಂದಣಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್‍ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

3 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

13 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

14 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

14 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

15 hours ago