ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…