ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…