ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…