ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ ಮಾತ್ರ ಅತ್ಯಧಿಕ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸಿದ್ದರು.
ಬುಧವಾರ ಮಹಾವೀರ ಜಯಂತಿ ರಜೆ ಇದ್ದರೂ ಮತ್ತು ಗುರುವಾರ ಮತದಾನ ಇದ್ದುದರಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.ಶುಕ್ರವಾರ ಗುಡ್ಪ್ರೈಡೆ ರಜೆಯಾದರು ಭಕ್ತರ ಸಂಖ್ಯೆ ಹೆಚ್ಚಿರಲಿಲ್ಲ.ಆದರೆ ಶನಿವಾರ ಏಕಾಏಕಿ ಅತ್ಯಧಿಕ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದರು. ಶನಿವಾರ ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ, ಮಹಾಪೂಜೆ, ಆಶ್ಲೇಷ ಬಲಿ ಪೂಜೆ,
ನಾಗಪ್ರತಿಷ್ಠೆ, ಮುಂತಾದ ಸೇವೆಗಳನ್ನು ನೆರವೇರಿಸಿಕೊಂಡರು. ಹೆಚ್ಚಿನ ಸಂಖ್ಯೆಯ ಭಕ್ತರು ಬಂದ ಹಿನ್ನಲೆಯಲ್ಲಿ ದೇಗುಲದ ಒಳಾಂಗಣ, ಹೊರಾಂಗಣ ಹಾಗೂ ರಥಬೀದಿಗಳಲ್ಲಿ ಅಧಿಕ ಜನಸಂದಣಿಯಿತ್ತು. ದೇವಳದ ಹೊರಾಂಗಣದಲ್ಲಿ ಭಕ್ತಾಧಿಗಳು ಮಾರುದ್ದದ ನಾಲ್ಕು ಸರದಿ ಸಾಲಿನಲ್ಲಿ ತೆರಳಿ ದೇವರ ದರುಶನ ಪಡೆದರು. ಆದಿಸುಬ್ರಹ್ಮಣ್ಯ, ಕುಮಾರಧಾರ ಸ್ನಾನಘಟ್ಟದಲ್ಲಿಯು ಕೂಡಾ ಜನದಟ್ಟಣೆ ಕಂಡುಬಂದಿತ್ತು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…