ಸರಣಿ ಶಿವಪೂಜಾ ಅಭಿಯಾನ : ಪೂರ್ವಭಾವಿ ಸಭೆ

June 3, 2019
7:00 PM

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.

ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ  ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.

ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror