ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.
ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.
ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…