ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.
ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.
ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…