ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.
ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.
ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…