ಧಾರ್ಮಿಕ

ಸರಣಿ ಶಿವಪೂಜಾ ಅಭಿಯಾನ : ಪೂರ್ವಭಾವಿ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.

Advertisement
Advertisement

ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ  ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.

ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

4 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

4 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

4 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

5 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

5 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

5 hours ago