Advertisement
ಧಾರ್ಮಿಕ

ಸರಣಿ ಶಿವಪೂಜಾ ಅಭಿಯಾನ : ಪೂರ್ವಭಾವಿ ಸಭೆ

Share

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.

ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ  ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.

Advertisement

ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

6 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

7 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

23 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

23 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago