Advertisement
ಧಾರ್ಮಿಕ

ಸರಣಿ ಶಿವಪೂಜಾ ಅಭಿಯಾನ : ಪೂರ್ವಭಾವಿ ಸಭೆ

Share

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.

ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ  ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.

ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

14 minutes ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

7 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

15 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

16 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago