Advertisement
ಧಾರ್ಮಿಕ

ಸರಣಿ ಶಿವಪೂಜಾ ಅಭಿಯಾನ : ಪೂರ್ವಭಾವಿ ಸಭೆ

Share

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳ ಮನೆಯಲ್ಲಿ ನಡೆಸಲ್ಪಡುವ ಸರಣಿ ಶಿವಪೂಜಾ ಅಭಿಯಾನವನ್ನು ಪ್ರಾರಂಭಿಸುವ ಸಲುವಾಗಿ ಪೋಷಕರ ಪೂರ್ವಭಾವಿ ಸಭೆಯು ಶ್ರೀ ಕೇಶವಕೃಪಾದಲ್ಲಿ ನಡೆಯಿತು.

ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಶಿವಪೂಜೆಯ ಬಗ್ಗೆ ಮಾಹಿತಿ ಹಾಗೂ ಪ್ರಯೋಜನದೊಂದಿಗೆ ಧರ್ಮಜಾಗೃತಿಯ ಸಂದೇಶವನ್ನು ನೀಡುವ ಶಿವಾರಾಧನೆಯ ಮಹತ್ವವನ್ನು ವಿವರಿಸಿದರು.
ಈ ವರ್ಷದ ಅಭಿಯಾನದ ಪ್ರಧಾನ ಸಂಚಾಲಕರಾಗಿ ಉದಯಶಂಕರ ಭಟ್ ಕೊಡ್ಯಡ್ಕ ಹಾಗೂ ಸಹಸಂಚಾಲಕರಾಗಿ ಸತ್ಯನಾರಾಯಣ ಕರತಂಡ ಮತ್ತು ಮಹಿಳಾ ಸಂಚಾಲಕಿಯಾಗಿ  ಮಮತಾ ರಾಜಾರಾಮ ಅವರನ್ನು ಆಯ್ಕೆ ಮಾಡಲಾಗಿದೆ.
ಸದ್ರಿ ವರ್ಷದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಸುಮಾರು 30 ಮನೆಗಳಲ್ಲಿ ಪ್ರತೀ ಭಾನುವಾರದಂದು ಶಿವಾರಾಧನೆ ನಡೆಯಲಿದ್ದು, ಈ ಹಿಂದಿನ ವರ್ಷಗಳಲ್ಲಿ ಒಟ್ಟು 406 ಶಿವಪೂಜಾ ನೆರವೇರಿಸಿದ್ದು, 407ನೇ ಅಭಿಯಾನದಿಂದ ಮುಂದುವರಿಯಲಿದೆ. ಸಪ್ಟಂಬರ್ ತಿಂಗಳ 15ರಂದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಸದ್ರಿ ವರ್ಷದ ಅಭಿಯಾನವು ಸಮಾರೋಪಗೊಳ್ಳಲಿದೆ.

ವೇದಿಕೆಯಲ್ಲಿ ರಾಜಗೋಪಾಲ ಭಟ್, ವೇ| ಮೂ| ಸುದರ್ಶನ ಭಟ್, ಕುಂಬ್ರ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ಅಭಿಯಾನದ ನೂತನ ಸಂಚಾಲಕ ಉದಯಶಂಕರ ಭಟ್ ಕೊಡ್ಯಡ್ಕ ಎಲ್ಲರ ಸಹಕಾರವನ್ನು ಯಾಚಿಸಿ ಧನ್ಯವಾದ ಸಮರ್ಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

8 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

14 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

18 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago