ಸುದ್ದಿಗಳು

ಸರಳಗೊಳಿಸುವ ಉದ್ದೇಶದಿಂದ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅತ್ಯಂತ ಕ್ಲಿಷ್ಟವಾಗಿದ್ದ ತೆರಿಗೆ ವ್ಯವಸ್ಥೆಯನ್ನು  ಸರಳಗೊಳಿಸುವ ಉದ್ದೇಶಹೊಂದಿರುವ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು ಮತ್ತು ಹಳೆಯ ವ್ಯವಸ್ಥೆಯಿಂದ ಹೊಸ  ತೆರಿಗೆ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದರೆ ಅದರ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಅತೀ ಅಗತ್ಯ  ಎಂದು ನೆಹರು ಪದವಿ ಕಾಲೇಜಿನ ವಾಣಿಜ್ಯ  ವಿಭಾಗದ ಉಪನ್ಯಾಸಕರಾದ  ಪ್ರೊ. ರುದ್ರಕುಮಾರ್   ಹೇಳಿದರು.

Advertisement
Advertisement

ಅವರು ಕಾಲೇಜಿನ  ವಾಣಿಜ್ಯ  ಸಂಘ ಆಯೋಜಿಸಿದ್ದ ಜಿ ಎಸ್ ಟಿ  ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಹೊಸ ತೆರಿಗೆ ವ್ಯವಸ್ಥೆಯ ಚಿಂತನೆ ಯಾಕೆ ಬಂತು, ಅದನ್ನು ಯಾವ ರೀತಿಯಾಗಿ ಅಳವಡಿಸುವ ಪ್ರಯತ್ನಗಳು ನಡೆದವು ಮತ್ತು ಒಟ್ಟಾರೆಯಾಗಿ ಹೊಸ ತೆರಿಗೆ ವ್ಯವಸ್ಥೆ ಏನು ಎಂಬುದನ್ನು ಸವಿವರವಾಗಿ  ತಿಳಿಯಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ  ಭವಿಷ್ಯದ ಉದ್ಯೋಗದ ಅವಕಾಶಗಳನ್ನು ಬಳಸಿಕೊಳ್ಳಬೇಕಾದರೆ ಸಮಯಕ್ಕೆ ಸರಿಯಾಗಿ ಆಗುಹೋಗುಗಳನ್ನು ತಿಳಿದುಕೊಳ್ಳುವುದು  ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಉಪನ್ಯಾಸಕರಾದ  ಸಾವಿತ್ರಿ ಮತ್ತು ಕು. ಹರ್ಷಿತಾ  ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯತಾ ಅತಿಥಿಗಳನ್ನು ಪರಿಚಯಿಸಿ, ವಿಸ್ಮಿತ ಸ್ವಾಗತಿಸಿ, ವಿದ್ಯಾರ್ಥಿ ಮೋಕ್ಷಿತ್ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

9 minutes ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

4 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

8 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

8 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

8 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

16 hours ago