Advertisement
ಸುದ್ದಿಗಳು

ಸರಳಗೊಳಿಸುವ ಉದ್ದೇಶದಿಂದ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು

Share

ಸುಳ್ಯ: ಅತ್ಯಂತ ಕ್ಲಿಷ್ಟವಾಗಿದ್ದ ತೆರಿಗೆ ವ್ಯವಸ್ಥೆಯನ್ನು  ಸರಳಗೊಳಿಸುವ ಉದ್ದೇಶಹೊಂದಿರುವ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು ಮತ್ತು ಹಳೆಯ ವ್ಯವಸ್ಥೆಯಿಂದ ಹೊಸ  ತೆರಿಗೆ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದರೆ ಅದರ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಅತೀ ಅಗತ್ಯ  ಎಂದು ನೆಹರು ಪದವಿ ಕಾಲೇಜಿನ ವಾಣಿಜ್ಯ  ವಿಭಾಗದ ಉಪನ್ಯಾಸಕರಾದ  ಪ್ರೊ. ರುದ್ರಕುಮಾರ್   ಹೇಳಿದರು.

ಅವರು ಕಾಲೇಜಿನ  ವಾಣಿಜ್ಯ  ಸಂಘ ಆಯೋಜಿಸಿದ್ದ ಜಿ ಎಸ್ ಟಿ  ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಹೊಸ ತೆರಿಗೆ ವ್ಯವಸ್ಥೆಯ ಚಿಂತನೆ ಯಾಕೆ ಬಂತು, ಅದನ್ನು ಯಾವ ರೀತಿಯಾಗಿ ಅಳವಡಿಸುವ ಪ್ರಯತ್ನಗಳು ನಡೆದವು ಮತ್ತು ಒಟ್ಟಾರೆಯಾಗಿ ಹೊಸ ತೆರಿಗೆ ವ್ಯವಸ್ಥೆ ಏನು ಎಂಬುದನ್ನು ಸವಿವರವಾಗಿ  ತಿಳಿಯಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ  ಭವಿಷ್ಯದ ಉದ್ಯೋಗದ ಅವಕಾಶಗಳನ್ನು ಬಳಸಿಕೊಳ್ಳಬೇಕಾದರೆ ಸಮಯಕ್ಕೆ ಸರಿಯಾಗಿ ಆಗುಹೋಗುಗಳನ್ನು ತಿಳಿದುಕೊಳ್ಳುವುದು  ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಉಪನ್ಯಾಸಕರಾದ  ಸಾವಿತ್ರಿ ಮತ್ತು ಕು. ಹರ್ಷಿತಾ  ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯತಾ ಅತಿಥಿಗಳನ್ನು ಪರಿಚಯಿಸಿ, ವಿಸ್ಮಿತ ಸ್ವಾಗತಿಸಿ, ವಿದ್ಯಾರ್ಥಿ ಮೋಕ್ಷಿತ್ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

16 minutes ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 hour ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

8 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

14 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago