ಸುಳ್ಯ: ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರ್ನಾಟಕ ಘಟಕದ ಕರೆಯ ಮೇರೆಗೆ ಭೂಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ಹಾಗು ಬೀಜ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ರೈತಾಪಿ ಕೃಷಿ ಉಳಿವಿಗಾಗಿ ಪ್ರತಿ ತಾಲೂಕು ಮಟ್ಟದಲ್ಲಿ ಪ್ರತಿಭಟನಾ ಸಭೆ ನಡೆಸಿ ಸರ್ಕಾರದ ನಿಲುವನ್ನು ಖಂಡಿಸಲಾಗುವುದು.ಅದರ ಜೊತೆ ಜೂ.29 ರಂದು ಸುಳ್ಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಕೃಷಿಕರ ಭೂಮಿಯನ್ನು, ಮಾರುಕಟ್ಟೆ ವ್ಯವಸ್ಥೆಯನ್ನು ಕಾರ್ಪೊರೇಟ್ ಕಂಪೆನಿಗಳ ವಶಕ್ಕೆ ನೀಡುವ ಹುನ್ನಾರ ಅಡಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಖಾಸಗೀಯವರಿಗೆ ಒಪ್ಪಿಸಲು ತಿದ್ದುಪಡಿ ತರಲು ಹೊರಟಿದೆ. ಇದರಿಂದ ಕೃಷಿಕರಿಗೆ ದೊಡ್ಡ ಹೊಡೆತ ನೀಡಲಿದೆ. ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತಂದು ಕಾಳ ಸಂತೆ ಕೋರರು ಅಗತ್ಯ ವಸ್ತುಗಳನ್ನು ದಾಸ್ತಾನು ಹೊಂದಿ ಕೃತಕ ಅಭಾವ ಸೃಷ್ಠಿಸುವ ಸಾಧ್ಯತೆ ಇದೆ. ಕಾರ್ಮಿಕರ ಕಾನೂನುಗಳನ್ನು ತಡೆ ಹಿಡಿದು ಕಾರ್ಮಿಕರ ಹಕ್ಕನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಮುಖಂಡರಾದ ತೀರ್ಥರಾಮ ಅರಂತೋಡು, ದಿವಾಕರ ಪೈ ಮಜಿಗುಂಡಿ, ಕಾರ್ಮಿಕ ಮುಖಂಡ ಕೆ.ಪಿ.ಜಾನಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…