ಸರ್ವೆಯಲ್ಲಿ “ನೀರಿಂಗಿಸೋಣ ಬನ್ನಿ”ಅಭಿಯಾನದ 4ನೇ ಕಾರ್ಯಕ್ರಮ

June 25, 2019
9:00 AM

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 4 ನೆಯ ಕಾರ್ಯಕ್ರಮವಾಗಿ ಯುವಕ ಮಂಡಲದ ಗೌರವ ಸಲಹೆಗಾರ ಶಶಿಧರ್ ಎಸ್ ಡಿ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು.

Advertisement
Advertisement

ಶಶಿಧರ್ ಎಸ್ ಡಿ ಅವರು ಮಾತನಾಡಿ ಯುವಕ ಮಂಡಲದ ಗೌರವ ಸಲಹೆಗಾರನ ನೆಲೆಯಲ್ಲಿ ನನ್ನ ಜಮೀನಿನಲ್ಲಿ ಬೀಳುವ ಮಳೆಯ ನೀರು  ಪೋಲಾಗದಂತೆ ಭೂಮಿಗೆ ಇಂಗಿಸುವ ಸಲುವಾಗಿ ಯುವಕ ಮಂಡಲದ ಅಭಿಯಾನಕ್ಕೆ ಪೂರಕವಾಗಿ ಇಂಗುಗುಂಡಿ ನಿರ್ಮಿಸಿದ್ದೇನೆ. ಅಭಿಯಾನದ ಭಾಗವಾಗಿ ಯುವಕ ಮಂಡಲದ ಎಲ್ಲ 45 ಸದಸ್ಯರ ಮನೆಗಳಲ್ಲಿ ಕೂಡ ಸಣ್ಣ ಅಥವಾ ದೊಡ್ಡ ಇಂಗುಗುಂಡಿಗಳ ನಿರ್ಮಾಣವಾಗಬೇಕು ಎಂದರು.

ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ,ಮುಂಡೂರು ಗ್ರಾ.ಪಂ ಅಧ್ಯಕ್ಷ ವಸಂತ್ ಎಸ್ ಡಿ,ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷ ಸುರೇಶ್ ಸರ್ವೆದೋಳಗುತ್ತು ,ಪದಾಧಿಕಾರಿಗಳಾದ ಶರೀಫ್ ಎಸ್ ಎಂ, ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, ಡಾ ಪ್ರವೀಣ್ ಸರ್ವೆದೋಳ ಗುತ್ತು, ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, ಕೀರ್ತನ್ ಸರ್ವೆದೋಳಗುತ್ತು, ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಸದಸ್ಯರಾದ ವಸಂತ ಪೂಜಾರಿ ಕೈಪಂಗಳದೋಳ,ರಾಮಕೃಷ್ಣ ಸರ್ವೆದೋಳಗುತ್ತು, ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಅರುಣ್ ಕೆ ಜೆ, ಸರ್ವೆ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಉಮಾವತಿ ಜಯರಾಜ್ ಸುವರ್ಣ, ಗೀತಾ ಮರಿಯ, ದೇವಕಿ ಯೋಗೀಶ್, ಮಾಜಿ ಪಂಚಾಯತ್ ಸದಸ್ಯರಾದ ಯತೀಶ್ ರೈ ಮೇಗಿನಗುತ್ತು, ಸಾಮಾಜಿಕ ಕಾರ್ಯಕರ್ತ ಧನಂಜಯ ಕುಲಾಲ್ ಮುಂಡೂರು, ವಿಶ್ವನಾಥ್ ಗೌಡ ಮೊದಲಾದವರು ಭಾಗವಹಿಸಿದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror