ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 4 ನೆಯ ಕಾರ್ಯಕ್ರಮವಾಗಿ ಯುವಕ ಮಂಡಲದ ಗೌರವ ಸಲಹೆಗಾರ ಶಶಿಧರ್ ಎಸ್ ಡಿ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು.
ಶಶಿಧರ್ ಎಸ್ ಡಿ ಅವರು ಮಾತನಾಡಿ ಯುವಕ ಮಂಡಲದ ಗೌರವ ಸಲಹೆಗಾರನ ನೆಲೆಯಲ್ಲಿ ನನ್ನ ಜಮೀನಿನಲ್ಲಿ ಬೀಳುವ ಮಳೆಯ ನೀರು ಪೋಲಾಗದಂತೆ ಭೂಮಿಗೆ ಇಂಗಿಸುವ ಸಲುವಾಗಿ ಯುವಕ ಮಂಡಲದ ಅಭಿಯಾನಕ್ಕೆ ಪೂರಕವಾಗಿ ಇಂಗುಗುಂಡಿ ನಿರ್ಮಿಸಿದ್ದೇನೆ. ಅಭಿಯಾನದ ಭಾಗವಾಗಿ ಯುವಕ ಮಂಡಲದ ಎಲ್ಲ 45 ಸದಸ್ಯರ ಮನೆಗಳಲ್ಲಿ ಕೂಡ ಸಣ್ಣ ಅಥವಾ ದೊಡ್ಡ ಇಂಗುಗುಂಡಿಗಳ ನಿರ್ಮಾಣವಾಗಬೇಕು ಎಂದರು.
ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ,ಮುಂಡೂರು ಗ್ರಾ.ಪಂ ಅಧ್ಯಕ್ಷ ವಸಂತ್ ಎಸ್ ಡಿ,ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಗೌರವ ಸಲಹೆಗಾರರಾದ ಶಶಿಧರ್ ಎಸ್ ಡಿ, ಮಾಜಿ ಅಧ್ಯಕ್ಷ ಸುರೇಶ್ ಸರ್ವೆದೋಳಗುತ್ತು ,ಪದಾಧಿಕಾರಿಗಳಾದ ಶರೀಫ್ ಎಸ್ ಎಂ, ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, ಡಾ ಪ್ರವೀಣ್ ಸರ್ವೆದೋಳ ಗುತ್ತು, ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, ಕೀರ್ತನ್ ಸರ್ವೆದೋಳಗುತ್ತು, ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಸದಸ್ಯರಾದ ವಸಂತ ಪೂಜಾರಿ ಕೈಪಂಗಳದೋಳ,ರಾಮಕೃಷ್ಣ ಸರ್ವೆದೋಳಗುತ್ತು, ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಅರುಣ್ ಕೆ ಜೆ, ಸರ್ವೆ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಉಮಾವತಿ ಜಯರಾಜ್ ಸುವರ್ಣ, ಗೀತಾ ಮರಿಯ, ದೇವಕಿ ಯೋಗೀಶ್, ಮಾಜಿ ಪಂಚಾಯತ್ ಸದಸ್ಯರಾದ ಯತೀಶ್ ರೈ ಮೇಗಿನಗುತ್ತು, ಸಾಮಾಜಿಕ ಕಾರ್ಯಕರ್ತ ಧನಂಜಯ ಕುಲಾಲ್ ಮುಂಡೂರು, ವಿಶ್ವನಾಥ್ ಗೌಡ ಮೊದಲಾದವರು ಭಾಗವಹಿಸಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…