ವಿಪರೀತ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಜನರು ಜಲಸಂರಕ್ಷಣೆಯತ್ತ ಚಿತ್ತ ನೆಡಬೇಕಿದೆ. ನೀರಿಂಗಿಸುವಿಕೆ ಮಹತ್ವದ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಯುವಕ ಮಂಡಲದ ವತಿಯಿಂದ ಆಯೋಜಿಸಲಿದ್ದೇವೆ ಎಂದು ಕಾರ್ಯಕ್ರಮ ಸಂಯೋಜಕ, ಯುವಕ ಮಂಡಲದ ಖಜಾಂಚಿ ನಾಗೇಶ್ ಪಟ್ಟೆಮಜಲು ತಿಳಿಸಿದರು.
ಅಭಿಯಾನದ ಅಂಗವಾಗಿ ಯುವಕ ಮಂಡಲದ ಸದಸ್ಯರ ಹಾಗೂ ಆಸಕ್ತ ಗ್ರಾಮಸ್ಥರ ಜಮೀನುಗಳಲ್ಲಿ ಅಂತರ್ಜಲ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಉದ್ದೇಶವನ್ನು ಯುವಕ ಮಂಡಲ ಹೊಂದಿದೆ.
ಯುವಕ ಮಂಡಲದ ಗೌರವಾಧ್ಯಕ್ಷರಾದ ಮುಂಡೂರು ಗ್ರಾಮ ಪಂ ಅಧ್ಯಕ್ಷ ವಸಂತ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕರಂಬಾರು, ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀನಿವಾಸ್ ಎಚ್ ಬಿ, ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ನಾಗೇಶ್ ಪಟ್ಟೆಮಜಲು, ಹರೀಶ್ ಆಲೇಕಿ, ಅಶೋಕ್ ಎಸ್ ಡಿ ಸದಸ್ಯರಾದ ವಸಂತ ಪೂಜಾರಿ ಕೈಪಂಗಳದೋಳ, ಲೋಕೇಶ್ ಗೌಡ ಎಂ, ಕೃಷ್ಣಪ್ಪ ಪಟ್ಟೆಮಜಲು, ಶರತ್ ಸರ್ವೆದೋಳಗುತ್ತು, ಸ್ಥಳೀಯರಾದ ಪೂವಪ್ಪ, ಸುರೇಶ ಮೊದಲಾದವರು ಉಪಸ್ಥಿತರಿದ್ದರು.