ನಮ್ಮೂರ ಸುದ್ದಿ

ಸರ್ವೆ : ವಿಶೇಷ ಸಾಧನೆ ತೋರಿದ ಯುವಕ ಮಂಡಲದ ಸದಸ್ಯರಿಗೆ ಅಭಿನಂದನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ 2018-19 ರ ಸಾಲಿನಲ್ಲಿ ವಿಶೇಷ ಸಾಧನೆ ತೋರಿದ ಯುವಕ ಮಂಡಲದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಸರ್ವೆ ಎಸ್ ಜಿ ಎಂ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಯುವಕ ಮಂಡಲದ ಕಾರ್ಯಕ್ರಮಗಳ ಆಯೋಜನೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ಸದಸ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸ್ವಚ್ಛ ಭಾರತ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮಗಳ ಸಂಯೋಜಕ ,ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಅತಿ ಹೆಚ್ಚು ಮಾಸಿಕ ಸಭೆಗಳಲ್ಲಿ ಭಾಗವಹಿಸಿದ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಂಯೋಜಕ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, ಸಾಂಸ್ಕೃತಿಕ ಕಾರ್ಯಕ್ರಮ,”ಕಂಡಡೊಂಜಿ ದಿನ ” ಕಾರ್ಯಕ್ರಮ ಸಂಯೋಜಕ ಗೌತಮ್ ರಾಜ್ ಕರಂಬಾರು, ಭಜನಾ ತರಬೇತಿ ಕಾರ್ಯಕ್ರಮಗಳ ಸಂಯೋಜಕ ಮನೋಜ್ ಸುವರ್ಣ ಸೊರಕೆ, ಭಜನಾ ತರಬೇತುದಾರ ಜಯರಾಜ್ ಸುವರ್ಣ ಸೊರಕೆ, ಅಕ್ರಮ ಮದ್ಯ ಮಾರಾಟ ವಿರುದ್ಧದ ಪ್ರತಿಭಟನಾ ಸಭೆ ಮತ್ತು ಅಭಿಯಾನದ ಯಶಸ್ಸಿಗಾಗಿ ದುಡಿದ ದಿನೇಶ್ ಭಕ್ತಕೋಡಿ ಹಾಗೂ ಬಾಲಕೃಷ್ಣ ಕಲ್ಲಗುಡ್ಡೆ, ಯುವಕ ಮಂಡಲದ ಅತಿ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ಅವರನ್ನು ಅಭಿನಂದಿಸಲಾಯಿತು.

ಯುವಕ ಮಂಡಲದ ಗೌರವಾಧ್ಯಕ್ಷ , ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ್ ಎಸ್ ಡಿ, ಗೌರವ ಸಲಹೆಗಾರರಾದ ಪ್ರಸನ್ನ ಜಿ ಕೆ, ಶಶಿಧರ್ ಎಸ್ ಡಿ, ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯ ಗುರು ಶ್ರೀನಿವಾಸ್ ಎಚ್ ಬಿ ಸಾಧಕರನ್ನು ಅಭಿನಂದಿಸಿದರು.

ಯುವಕ ಮಂಡಲದ ಪ್ರ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಮಾಜಿ ಅಧ್ಯಕ್ಷರಾದ ಸುರೇಶ್ ಸರ್ವೆದೋಳಗುತ್ತು , ಪದಾ„ಕಾರಿಗಳಾದ ಅಶೋಕ್ ಎಸ್ ಡಿ, ಹರೀಶ್ ಪಾಲೆತ್ತಗುರಿ, ಸದಸ್ಯರಾದ ವಸಂತ ಪೂಜಾರಿ ಕೈಪಂಗಳದೋಳ,ರಾಮಕೃಷ್ಣ ಸರ್ವೆದೋಳಗುತ್ತು , ಜಯಪ್ರಕಾಶ್ ಆಲೇಕಿ, ಕಿರಣ್ ಸರ್ವೆದೋಳಗುತ್ತು , ಪ್ರಮೋದ ಆಲೇಕಿ, ಗೌತಮ್ ಪಟ್ಟೆಮಜಲು, ಶಿವಪ್ರಸಾದ್ ಆಲೇಕಿ, ನಂದನ್ ಸರ್ವೆದೋಳಗುತ್ತು, ಸಂದೇಶ ಆಚಾರ್ಯ ಭಕ್ತಕೋಡಿ, ಸುರೇಶ್ ಆಚಾರ್ಯ ಭಕ್ತಕೋಡಿ, ಲಕ್ಷ್ಮಣ ಆಚಾರ್ಯ ಭಕ್ತಕೋಡಿ ಉಪಸ್ಥಿತರಿದ್ದರು.

Advertisement

ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳ ಗುತ್ತು ಪ್ರಸ್ತಾವನೆಗೈದರು.  ಕಾರ್ಯಕಾರಿ ಸಮಿತಿ ಸದಸ್ಯ ರಾಮಣ್ಣ ಪೂಜಾರಿ ಸ್ವಾಗತಿಸಿದರು, ಖಜಾಂಚಿ ನಾಗೇಶ್ ಪಟ್ಟೆಮಜಲು ವಂದಿಸಿದರು. ಜತೆ ಕಾರ್ಯದರ್ಶಿ ಗುರುರಾಜ್ ಪಟ್ಟೆಮಜಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

5 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

5 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

5 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

5 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

6 hours ago