Advertisement
ನಮ್ಮೂರ ಸುದ್ದಿ

ಸರ್ವೆ : ವಿಶೇಷ ಸಾಧನೆ ತೋರಿದ ಯುವಕ ಮಂಡಲದ ಸದಸ್ಯರಿಗೆ ಅಭಿನಂದನೆ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ 2018-19 ರ ಸಾಲಿನಲ್ಲಿ ವಿಶೇಷ ಸಾಧನೆ ತೋರಿದ ಯುವಕ ಮಂಡಲದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಸರ್ವೆ ಎಸ್ ಜಿ ಎಂ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.

ಯುವಕ ಮಂಡಲದ ಕಾರ್ಯಕ್ರಮಗಳ ಆಯೋಜನೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ಸದಸ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಸ್ವಚ್ಛ ಭಾರತ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮಗಳ ಸಂಯೋಜಕ ,ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಅತಿ ಹೆಚ್ಚು ಮಾಸಿಕ ಸಭೆಗಳಲ್ಲಿ ಭಾಗವಹಿಸಿದ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಂಯೋಜಕ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, ಸಾಂಸ್ಕೃತಿಕ ಕಾರ್ಯಕ್ರಮ,”ಕಂಡಡೊಂಜಿ ದಿನ ” ಕಾರ್ಯಕ್ರಮ ಸಂಯೋಜಕ ಗೌತಮ್ ರಾಜ್ ಕರಂಬಾರು, ಭಜನಾ ತರಬೇತಿ ಕಾರ್ಯಕ್ರಮಗಳ ಸಂಯೋಜಕ ಮನೋಜ್ ಸುವರ್ಣ ಸೊರಕೆ, ಭಜನಾ ತರಬೇತುದಾರ ಜಯರಾಜ್ ಸುವರ್ಣ ಸೊರಕೆ, ಅಕ್ರಮ ಮದ್ಯ ಮಾರಾಟ ವಿರುದ್ಧದ ಪ್ರತಿಭಟನಾ ಸಭೆ ಮತ್ತು ಅಭಿಯಾನದ ಯಶಸ್ಸಿಗಾಗಿ ದುಡಿದ ದಿನೇಶ್ ಭಕ್ತಕೋಡಿ ಹಾಗೂ ಬಾಲಕೃಷ್ಣ ಕಲ್ಲಗುಡ್ಡೆ, ಯುವಕ ಮಂಡಲದ ಅತಿ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ಅವರನ್ನು ಅಭಿನಂದಿಸಲಾಯಿತು.

ಯುವಕ ಮಂಡಲದ ಗೌರವಾಧ್ಯಕ್ಷ , ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ್ ಎಸ್ ಡಿ, ಗೌರವ ಸಲಹೆಗಾರರಾದ ಪ್ರಸನ್ನ ಜಿ ಕೆ, ಶಶಿಧರ್ ಎಸ್ ಡಿ, ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯ ಗುರು ಶ್ರೀನಿವಾಸ್ ಎಚ್ ಬಿ ಸಾಧಕರನ್ನು ಅಭಿನಂದಿಸಿದರು.

ಯುವಕ ಮಂಡಲದ ಪ್ರ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಮಾಜಿ ಅಧ್ಯಕ್ಷರಾದ ಸುರೇಶ್ ಸರ್ವೆದೋಳಗುತ್ತು , ಪದಾ„ಕಾರಿಗಳಾದ ಅಶೋಕ್ ಎಸ್ ಡಿ, ಹರೀಶ್ ಪಾಲೆತ್ತಗುರಿ, ಸದಸ್ಯರಾದ ವಸಂತ ಪೂಜಾರಿ ಕೈಪಂಗಳದೋಳ,ರಾಮಕೃಷ್ಣ ಸರ್ವೆದೋಳಗುತ್ತು , ಜಯಪ್ರಕಾಶ್ ಆಲೇಕಿ, ಕಿರಣ್ ಸರ್ವೆದೋಳಗುತ್ತು , ಪ್ರಮೋದ ಆಲೇಕಿ, ಗೌತಮ್ ಪಟ್ಟೆಮಜಲು, ಶಿವಪ್ರಸಾದ್ ಆಲೇಕಿ, ನಂದನ್ ಸರ್ವೆದೋಳಗುತ್ತು, ಸಂದೇಶ ಆಚಾರ್ಯ ಭಕ್ತಕೋಡಿ, ಸುರೇಶ್ ಆಚಾರ್ಯ ಭಕ್ತಕೋಡಿ, ಲಕ್ಷ್ಮಣ ಆಚಾರ್ಯ ಭಕ್ತಕೋಡಿ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳ ಗುತ್ತು ಪ್ರಸ್ತಾವನೆಗೈದರು.  ಕಾರ್ಯಕಾರಿ ಸಮಿತಿ ಸದಸ್ಯ ರಾಮಣ್ಣ ಪೂಜಾರಿ ಸ್ವಾಗತಿಸಿದರು, ಖಜಾಂಚಿ ನಾಗೇಶ್ ಪಟ್ಟೆಮಜಲು ವಂದಿಸಿದರು. ಜತೆ ಕಾರ್ಯದರ್ಶಿ ಗುರುರಾಜ್ ಪಟ್ಟೆಮಜಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

5 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

6 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

15 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

22 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

22 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago