ಸವಣೂರು: ಹಿಂದು ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ ಇದರ ವತಿಯಿಂದ ಪ್ರತಿ ವರ್ಷದಂತೆ ಸರ್ವೆ ಗ್ರಾಮಕ್ಕೆ ಸಂಬಂಧಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ಸುಮಾರು 120 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಶಾಲಾ ಪರಿಕರಗಳನ್ನು ರವಿವಾರ ಸಂಜೆ ಸರ್ವೆ ಸುಬ್ರಾಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ಅವರು,ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ಶುಭಹಾರೈಸಿದರು.
ಮಂಗಳೂರಿನ ಕ್ಯಾಡ್ ಸೆಂಟರ್ ಫ್ರಾಂಚೈಸಿಯ ಸಾರಿಕ ಅನಿಲ್ ಹೆಗ್ಡೆ ಉಚಿತ ಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದರು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…