ಸವಣೂರು: ಹಿಂದು ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ ಇದರ ವತಿಯಿಂದ ಪ್ರತಿ ವರ್ಷದಂತೆ ಸರ್ವೆ ಗ್ರಾಮಕ್ಕೆ ಸಂಬಂಧಪಟ್ಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 1 ನೇ ತರಗತಿಯಿಂದ 10 ನೇ ತರಗತಿ ವರೆಗಿನ ಸುಮಾರು 120 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಶಾಲಾ ಪರಿಕರಗಳನ್ನು ರವಿವಾರ ಸಂಜೆ ಸರ್ವೆ ಸುಬ್ರಾಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಗಿರಿಶಂಕರ್ ಸುಲಾಯ ಅವರು,ಮಕ್ಕಳಿಗೆ ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾ. ಪಂ ಮಾಜಿ ಅಧ್ಯಕ್ಷ ಸದಾಶಿವ ಭಂಡಾರಿ ಬೋಟ್ಯಾಡಿ ಶುಭಹಾರೈಸಿದರು.
ಮಂಗಳೂರಿನ ಕ್ಯಾಡ್ ಸೆಂಟರ್ ಫ್ರಾಂಚೈಸಿಯ ಸಾರಿಕ ಅನಿಲ್ ಹೆಗ್ಡೆ ಉಚಿತ ಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದರು.
ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಬೆಳಿಯಪ್ಪ ಗೌಡ ಸರ್ವೆ,ಹಿಂ.ಜಾ.ವೇ. ಅಧ್ಯಕ್ಷ ಪದ್ಮನಾಭ ಗೌಡ ಸರ್ವೆ,ನವೀನ್ ರೈ ಸರ್ವೆ, ಯೋಗಿಶ್ ಟಿ, ಯತೀಶ್ ಸರ್ವೆ,ಗೌತಮ್ ರೈ,ಪ್ರವೀಣ್ ನಕ್ಕಿದಡ್ಕ,ದೇವಪ್ಪ ಕಾಡಬಾಗಿಲು,ಧನಂಜಯ,ಜಿತೇಶ್, ಕಿರಣ್,ಸುಂದರ,ಹರೀಶ್,ಸೌರಾಜ್ ,ಲಕ್ಷ್ಮೀಶ್ ರೈ ಸರ್ವೆ ಉಪಸ್ಥಿತರಿದ್ದರು.
ಸ್ವಸ್ತಿಕ್ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ, ಹಿಂ.ಜಾ. ವೇ ಕಾರ್ಯದರ್ಶಿ ಜನಾರ್ದನ ಸರ್ವೆ ವಂದಿಸಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…