ಸವಣೂರು : ಸವಣೂರು ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಭೆ ಹಾಗೂ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.
ಶಿಶು ಅಭಿವೃದ್ದಿ ಇಲಾಖೆಯ ಪುತ್ತೂರು ತಾಲೂಕು ಮೇಲ್ವಿಚಾರಕಿ ಸುಜಾತ ಅವರು ಕಾರ್ಯಕ್ರಮ ಉದ್ಘಾಟಿಸಿ ,ಇಲಾಖೆಯ ಯೋಜನೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹದ ಕುರಿತು ಮಾತನಾಡಿದರು.ಸಭೆಯಲ್ಲಿ ಆದರ್ಶ ಸ್ತ್ರೀ ಶಕ್ತಿ ಗೊಂಚಲು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯಶೋಧಾ,ಉಪಾಧ್ಯಕ್ಷರಾಗಿ ಕುಮಾರಿ,ಕಾರ್ಯದರ್ಶಿಯಾಗಿ ಗೀತಾ,ಜತೆ ಕಾರ್ಯದರ್ಶಿಯಾಗಿ ಆಸ್ಮಾನ್,ಕೋಶಾಧಿಕಾರಿಯಾಗಿ ಗೀತಾ,ಗೊಂಚಲಿನ ಪ್ರತಿನಿಧಿಯಾಗಿ ನಿವೇದಿತಾ ಅವರನ್ನು ಆಯ್ಕೆ ಮಾಡಲಾಯಿತು.
ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ,ಸವಣೂರು ಅಂಗನವಾಡಿ ಕಾರ್ಯಕರ್ತೆ ಮಮತಾ ಜಿ.ಬಿ,ಪಣೆಮಜಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಜಯ ಈಶ್ವರ ಗೌಡ ಕಾಯರ್ಗ,ಆರೇಲ್ತಡಿ ಅಂಗನವಾಡಿ ಕಾರ್ಯಕರ್ತೆ ಮಮತಾ,ಪೆರಿಯಡ್ಕ ಅಂಗನವಾಡಿ ಕಾರ್ಯಕರ್ತೆ ಕಾವ್ಯಾ ಉಪಸ್ಥಿತರಿದ್ದರು.
ಯಶೋಧಾ ನವೀನ್ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?