ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.
ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…