ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.
ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…