ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.
ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…