ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.
ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…