Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

Share

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

Advertisement
Advertisement

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

1 hour ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

1 hour ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

11 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

11 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

11 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago