ಸುದ್ದಿಗಳು

ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

Advertisement

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

6 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

21 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

21 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

21 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

21 hours ago