Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

Share

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

Advertisement
Advertisement
Advertisement
Advertisement

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

Advertisement

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

2 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

2 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago