Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

Share

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

5 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

17 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago