Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

Share

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

2 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

4 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

10 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

16 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

17 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago