Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ಘಟಕಕ್ಕೆ ಜಿ.ಪಂ.ಸಿಇಓ ಬೇಟಿ

Share

ಸವಣೂರು : ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿರುವ ಸವಣೂರು ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಸಂಜೆ ದ.ಕ.ಜಿ.ಪಂ. ಸಿಇಓ ಡಾ.ಆರ್ ಸೆಲ್ವಮಣಿ ಬೇಟಿ ನೀಡಿ ಘಟಕದ ಕಾರ್ಯವನ್ನು ವೀಕ್ಷಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಸೆಲ್ವಮಣಿ ಅವರು, ತ್ಯಾಜ್ಯ ವಿಲೇವಾರಿ ಘಟಕದ ವ್ಯವಸ್ಥೆ ಅಚ್ಚುಕಟ್ಟಾಗಿದ್ದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಬೇಕು. ತ್ಯಾಜ್ಯ ವಿಲೇವಾರಿ ತಗಲುವ ವೆಚ್ಚವನ್ನು ತ್ಯಾಜ್ಯಸಂಗ್ರಹಿಸಿ ನೀಡುತ್ತಿರುವವರಿಂದಲೇ ಪಡೆಯಬೇಕು. ಶುಲ್ಕ ಹೆಚ್ಚಳಕ್ಕೆ ಅವಕಾಶವಿದೆ. ಈ ಕುರಿತು ಆಡಳಿತ ಮಂಡಳಿ ಸಭೆಯಲ್ಲಿ ಕ್ರಮಕೈಗೊಳ್ಳಬಹುದು. ಘಟಕಕ್ಕೆ ಆವಶ್ಯಕವಾಗಿರುವ ಮೂಲಭೂತ ವ್ಯವಸ್ಥೆಗಾಗಿ 2 ಲಕ್ಷ ಅನುದಾನ ಮಂಜೂರು ಮಾಡಲಾಗುವುದು ಎಂದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು, ಘಟಕಕ್ಕೆ ಆವಶ್ಯವಿರುವ ವಿದ್ಯುತ್ ಸಂಪರ್ಕ, ಕೊಳವೆ ಬಾವಿ ಕೊರೆಯಲು ಗ್ರಾ.ಪಂ.ನಿಂದ ಅನುದಾನ ಮೀಸಲಿಡಲಾಗಿದೆ ಎಂದರು. ಪಿಡಿಓ ನಾರಾಯಣ ಬಟ್ಟೋಡಿ ಅವರು ಘಟಕದ ಕಾರ್ಯ ನಿರ್ವಹಣೆಯ ಕುರಿತು ಸಿಇಓ ಅವರಿಗೆ ವಿವರಿಸಿದರು.

ಈ ಸಂದರ್ಭ ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಗ್ರಾ.ಪಂ.ಲೆಕ್ಕಸಹಾಯಕ ಎ.ಮನ್ಮಥ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಸ್ವಚ್ಚತಾ ನಿರ್ವಾಹಕ ಬಾಬು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

4 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

22 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago