ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.
ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…