ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.
ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…