ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…