ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…