ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…