ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…