ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…