ಸವಣೂರು: ಇಲ್ಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತ್ರ್ ಹಬ್ಬವನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.
ಮಸೀದಿಯ ಮುದರ್ರಿಸ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿರವರು ವಿಶೇಷ ಈದ್ ನಮಾಝಿನ ಮೊದಲು ಈದ್ ಸಂದೇಶ ನೀಡಿದ ಅವರು `ಕಳೆದ ಒಂದು ತಿಂಗಳಿನಿಂದ ರಂಝಾನ್ ಉಪವಾಸ ಆಚರಿಸುತ್ತಾ ನಾವು ಆತ್ಮ ಸಂಸ್ಕರಣೆಗೆ ಒಡ್ಡಿಕೊಂಡಿದ್ದೇವೆ.ಅನುಗ್ರಹೀತ ರಂಝಾನ್ ಮಾಸ ನಮ್ಮಿಂದ ವಿದಾಯ ಕೋರಿದೆ. ರಂಝಾನಿನಲ್ಲಿ ನಮ್ಮ ಜೀವನಕ್ರಮದಲ್ಲಿ ಯಾವ ರೀತಿಯ ಧನಾತ್ಮಕ ಬದಲಾವಣೆಗಳನ್ನು ಮಾಡಿಕೊಂಡಿದ್ದೇವೆಯೋ ಅದನ್ನು ಮುಂಬರುವ ದಿನಗಳಲ್ಲಿ ಅನುಸರಿಸುವ ಮೂಲಕ ಅಲ್ಲಾಹನ ಸಂಪ್ರೀತಿಗೆ ಪಾತ್ರರಾಗಲು ಪರಿಶ್ರಮಿಸೋಣ.ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ ಈದ್ ಉಲ್ ಫಿತ್ರ್ ನಾಡಿನೆಲ್ಲೆಡೆ ಹರ್ಷೋಲ್ಲಾಸವನ್ನು ಉಂಟುಮಾಡಲಿ’ ಎಂದು ಶುಭ ಹಾರೈಸಿದರು.
ವಿಶೇಷ ಈದ್ ನಮಾಝಿನ ಬಳಿಕ ಕುತುಬಾ ಪಾರಾಯಣ ನಡೆಯಿತು. ನಂತರ ಅಗಲಿದ ಗುರುಹಿರಿಯರ ಸದ್ಗತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಮಾಝಿನ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಸಲ್ಲಿಸುವ ಮೂಲಕ ಈದ್ ಉಲ್ ಫಿತ್ರ್ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…