ಸವಣೂರು : ಜಲಶಕ್ತಿ ಜಲಾಮೃತ ಅಭಿಯಾನ ವಿಶೇಷ ಗ್ರಾಮ ಸಭೆ

September 7, 2019
6:00 PM

ಸವಣೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮತ್ತು ಜಲ ಶಕ್ತಿ-ಜಲಾಮೃತ ವಾರ್ಷಿಕ ಕ್ರಿಯಾ ಯೋಜನೆಯ ಗ್ರಾಮ ಸಭೆ ಗ್ರಾ.ಪಂ.ಸಭಾಂಗಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪಿ.ಕೆ.ವಿದ್ಯಾರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement

ಸಭೆಯಲ್ಲಿ ಹಳೆಯ ಬಾವಿ ಮತ್ತು ಕೆರೆಗಳನ್ನು ಪುನಶ್ಚೇತನಗೊಳಿಸಲು ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ಒದಗಿಸುವಂತೆ ಗ್ರಾಮಸ್ಥರ ವಿನಂತಿಸಿದರು.ಉದ್ಯೋಗ ಖಾತರಿ ಯೋಜನೆಯ ಉಪಯೋಗ ಹಾಗೂ ಕಾರ್ಯಯೋಜನೆಯ ಕುರಿತು ಎಂಜಿನಿಯರ್ ವಿನೋದ್ ಕುಮಾರ್ ಮಾಹಿತಿ ನೀಡಿದರು.

ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ಚಂದ್ರಶೇಖರ್ ಅವರು ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ವಿವರಿಸಿದರು.ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಸದಸ್ಯರು,ಗ್ರಾಮಸ್ಥರು ಪಾಲ್ಗೊಂಡಿದ್ದರು.

ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಸ್ವಾಗತಿಸಿ,ಸಿಬಂದಿ ದಯಾನಂದ ಮಾಲೆತ್ತಾರು ವಂದಿಸಿದರು.ಪ್ರಮೋದ್ ಕುಮಾರ್ ರೈ ನಿರೂಪಿಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?
June 14, 2025
7:53 AM
by: ವಿಶೇಷ ಪ್ರತಿನಿಧಿ
ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ
June 14, 2025
7:30 AM
by: The Rural Mirror ಸುದ್ದಿಜಾಲ
ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್
June 14, 2025
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group