ಸವಣೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮತ್ತು ಜಲ ಶಕ್ತಿ-ಜಲಾಮೃತ ವಾರ್ಷಿಕ ಕ್ರಿಯಾ ಯೋಜನೆಯ ಗ್ರಾಮ ಸಭೆ ಗ್ರಾ.ಪಂ.ಸಭಾಂಗಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪಿ.ಕೆ.ವಿದ್ಯಾರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಹಳೆಯ ಬಾವಿ ಮತ್ತು ಕೆರೆಗಳನ್ನು ಪುನಶ್ಚೇತನಗೊಳಿಸಲು ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ಒದಗಿಸುವಂತೆ ಗ್ರಾಮಸ್ಥರ ವಿನಂತಿಸಿದರು.ಉದ್ಯೋಗ ಖಾತರಿ ಯೋಜನೆಯ ಉಪಯೋಗ ಹಾಗೂ ಕಾರ್ಯಯೋಜನೆಯ ಕುರಿತು ಎಂಜಿನಿಯರ್ ವಿನೋದ್ ಕುಮಾರ್ ಮಾಹಿತಿ ನೀಡಿದರು.
ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ಚಂದ್ರಶೇಖರ್ ಅವರು ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ವಿವರಿಸಿದರು.ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಸದಸ್ಯರು,ಗ್ರಾಮಸ್ಥರು ಪಾಲ್ಗೊಂಡಿದ್ದರು.
ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಸ್ವಾಗತಿಸಿ,ಸಿಬಂದಿ ದಯಾನಂದ ಮಾಲೆತ್ತಾರು ವಂದಿಸಿದರು.ಪ್ರಮೋದ್ ಕುಮಾರ್ ರೈ ನಿರೂಪಿಸಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…