ಸವಣೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮತ್ತು ಜಲ ಶಕ್ತಿ-ಜಲಾಮೃತ ವಾರ್ಷಿಕ ಕ್ರಿಯಾ ಯೋಜನೆಯ ಗ್ರಾಮ ಸಭೆ ಗ್ರಾ.ಪಂ.ಸಭಾಂಗಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪಿ.ಕೆ.ವಿದ್ಯಾರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಹಳೆಯ ಬಾವಿ ಮತ್ತು ಕೆರೆಗಳನ್ನು ಪುನಶ್ಚೇತನಗೊಳಿಸಲು ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ಒದಗಿಸುವಂತೆ ಗ್ರಾಮಸ್ಥರ ವಿನಂತಿಸಿದರು.ಉದ್ಯೋಗ ಖಾತರಿ ಯೋಜನೆಯ ಉಪಯೋಗ ಹಾಗೂ ಕಾರ್ಯಯೋಜನೆಯ ಕುರಿತು ಎಂಜಿನಿಯರ್ ವಿನೋದ್ ಕುಮಾರ್ ಮಾಹಿತಿ ನೀಡಿದರು.
ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ಚಂದ್ರಶೇಖರ್ ಅವರು ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ವಿವರಿಸಿದರು.ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಸದಸ್ಯರು,ಗ್ರಾಮಸ್ಥರು ಪಾಲ್ಗೊಂಡಿದ್ದರು.
ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಸ್ವಾಗತಿಸಿ,ಸಿಬಂದಿ ದಯಾನಂದ ಮಾಲೆತ್ತಾರು ವಂದಿಸಿದರು.ಪ್ರಮೋದ್ ಕುಮಾರ್ ರೈ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…