ಸುದ್ದಿಗಳು

ಸವಣೂರು : ತಾಲೂಕು ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟದಿಂದ ರಕ್ತದಾನ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು :ರಕ್ತದಾನ ಶ್ರೇಷ್ಟ ದಾನ.ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯಪ್ರಾಪ್ತಿಯಾಗುತ್ತದೆ,ಆದರಿಂದ ರಕ್ತದಾನಿಗಳು ದೇವರಿಗೆ ಸಮಾನ ಎಂದು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಹೇಳಿದರು.

Advertisement

ಅವರು ಸವಣೂರು ವಿನಾಯಕ ಸಭಾಭವವನದಲ್ಲಿ  ಪುತ್ತೂರು ತಾಲೂಕು ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಸ.ಪ್ರಥಮ ದರ್ಜೆ ಕಾಲೇಜು ಬೆಳಂದೂರು, ಶ್ರೀ ಕ್ಲಿನಿಕಲ್ ಲ್ಯಾಬೋರೇಟರಿ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ವತಿಯಿಂದ ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ,ವರ್ತಕರ ಸಂಘ ಸವಣೂರು,ಶಾರಾದಾಂಬಾ ಸೇವಾ ಸಂಘ ಸವಣೂರು ಇದರ ಸಹಕಾರದೊಂದಿಗೆ ನಡೆದ ಸ್ವಯಂ ಪ್ರೇರಿತ ರಕ್ತದಾನ ಮತ್ತು ವರ್ಗೀಕರಣ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 53 ಬಾರಿ ರಕ್ತದಾನ ಮಾಡಿದ ಸವಣೂರು ಯುವಕ ಮಂಡಲ ಹಾಗೂ ಜನಜಾಗೃತಿ ವೇದಿಕೆಯ ಸವಣೂರು ವಲಯದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಧ್ವನಿವರ್ದಕ ಮತ್ತು ದೀಪಾಲಂಕಾರ ಮ್ಹಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರು,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಗಿರಿಶಂಕರ ಸುಲಾಯ, ,ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಸವಣೂರು ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅರ್ತಿಕೆರೆ,ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ತಾ.ಒಕ್ಕೂಟದ ಗೌರವಾಧ್ಯಕ್ಷ ಹೆನ್ರಿ ಡಿಸೋಜ,ಅನ್ವರ್ ವೆರೈಟಿ ಕಡಬ ,ಬೆಳಂದೂರು ಕಾಲೇಜಿನ ಪ್ರಾಚಾರ್ಯ ಪ್ರೋ.ಪದ್ಮನಾಭ ಕೆ , ಶ್ರೀ ಕ್ಲಿನಿಕಲ್ ಲ್ಯಾಬೋರೇಟರಿಯ ಮನೋಜ್ ಪಾರೆರಾ, ರೋಟರ್ಯಾಕ್ಟ್ ಕ್ಲಬ್ ಸ.ಪ್ರಥಮ ದರ್ಜೆ ಕಾಲೇಜು ಬೆಳಂದೂರುನ ಅಧ್ಯಕ್ಷ ಸುಶಾಂತ್, ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟದ ಕಾರ್ಯದರ್ಶಿ ಮನೋಹರ ಶೆಟ್ಟಿ, ಉಪಾಧ್ಯಕ್ಷ ದಾವೂದ್ , ಸಹಕಾರ್ಯದಶಿ ನವೀನ್ ಕೋಶಾ„ಕಾರಿ ಸಿಪ್ರಿಯನ್ ಮೊರಾಸ್,ಸಂಘಟನಾ ಕಾರ್ಯದರ್ಶಿಗಳಾದ ಅಶ್ರಫ್ ,ಚಂದ್ರಹಾಸ ಆಳ್ವ ಶಿವಕೃಪಾ ,ಸೀತಾರಾಮ ಬಲ್ನಾಡು,ಸುರೇಶ್ ಗುರುಜ್ಯೋತಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Advertisement

ತಾಲೂಕು ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿ,ವಂದಿಸಿದರು.ಶಿವಜಿತ್ ವೈ ಪ್ರಾರ್ಥಿಸಿದರು.ಇಡ್ಯಡ್ಕ ಶಾಲಾ ಶಿಕ್ಷಕ ಜಯಂತ ವೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

1 hour ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

9 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

14 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

15 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago