Advertisement
ಸುದ್ದಿಗಳು

ಸವಣೂರು : ತಾಲೂಕು ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟದಿಂದ ರಕ್ತದಾನ ಶಿಬಿರ

Share

ಸವಣೂರು :ರಕ್ತದಾನ ಶ್ರೇಷ್ಟ ದಾನ.ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯಪ್ರಾಪ್ತಿಯಾಗುತ್ತದೆ,ಆದರಿಂದ ರಕ್ತದಾನಿಗಳು ದೇವರಿಗೆ ಸಮಾನ ಎಂದು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಹೇಳಿದರು.

ಅವರು ಸವಣೂರು ವಿನಾಯಕ ಸಭಾಭವವನದಲ್ಲಿ  ಪುತ್ತೂರು ತಾಲೂಕು ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಸ.ಪ್ರಥಮ ದರ್ಜೆ ಕಾಲೇಜು ಬೆಳಂದೂರು, ಶ್ರೀ ಕ್ಲಿನಿಕಲ್ ಲ್ಯಾಬೋರೇಟರಿ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ವತಿಯಿಂದ ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ,ವರ್ತಕರ ಸಂಘ ಸವಣೂರು,ಶಾರಾದಾಂಬಾ ಸೇವಾ ಸಂಘ ಸವಣೂರು ಇದರ ಸಹಕಾರದೊಂದಿಗೆ ನಡೆದ ಸ್ವಯಂ ಪ್ರೇರಿತ ರಕ್ತದಾನ ಮತ್ತು ವರ್ಗೀಕರಣ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 53 ಬಾರಿ ರಕ್ತದಾನ ಮಾಡಿದ ಸವಣೂರು ಯುವಕ ಮಂಡಲ ಹಾಗೂ ಜನಜಾಗೃತಿ ವೇದಿಕೆಯ ಸವಣೂರು ವಲಯದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಧ್ವನಿವರ್ದಕ ಮತ್ತು ದೀಪಾಲಂಕಾರ ಮ್ಹಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರು,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಗಿರಿಶಂಕರ ಸುಲಾಯ, ,ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಸವಣೂರು ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅರ್ತಿಕೆರೆ,ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ತಾ.ಒಕ್ಕೂಟದ ಗೌರವಾಧ್ಯಕ್ಷ ಹೆನ್ರಿ ಡಿಸೋಜ,ಅನ್ವರ್ ವೆರೈಟಿ ಕಡಬ ,ಬೆಳಂದೂರು ಕಾಲೇಜಿನ ಪ್ರಾಚಾರ್ಯ ಪ್ರೋ.ಪದ್ಮನಾಭ ಕೆ , ಶ್ರೀ ಕ್ಲಿನಿಕಲ್ ಲ್ಯಾಬೋರೇಟರಿಯ ಮನೋಜ್ ಪಾರೆರಾ, ರೋಟರ್ಯಾಕ್ಟ್ ಕ್ಲಬ್ ಸ.ಪ್ರಥಮ ದರ್ಜೆ ಕಾಲೇಜು ಬೆಳಂದೂರುನ ಅಧ್ಯಕ್ಷ ಸುಶಾಂತ್, ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟದ ಕಾರ್ಯದರ್ಶಿ ಮನೋಹರ ಶೆಟ್ಟಿ, ಉಪಾಧ್ಯಕ್ಷ ದಾವೂದ್ , ಸಹಕಾರ್ಯದಶಿ ನವೀನ್ ಕೋಶಾ„ಕಾರಿ ಸಿಪ್ರಿಯನ್ ಮೊರಾಸ್,ಸಂಘಟನಾ ಕಾರ್ಯದರ್ಶಿಗಳಾದ ಅಶ್ರಫ್ ,ಚಂದ್ರಹಾಸ ಆಳ್ವ ಶಿವಕೃಪಾ ,ಸೀತಾರಾಮ ಬಲ್ನಾಡು,ಸುರೇಶ್ ಗುರುಜ್ಯೋತಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ತಾಲೂಕು ಧ್ವನಿ,ಬೆಳಕು ಮತ್ತು ಶಾಮಿಯಾನ ಸಂಯೋಜಕರ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿ,ವಂದಿಸಿದರು.ಶಿವಜಿತ್ ವೈ ಪ್ರಾರ್ಥಿಸಿದರು.ಇಡ್ಯಡ್ಕ ಶಾಲಾ ಶಿಕ್ಷಕ ಜಯಂತ ವೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

8 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

8 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

8 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

8 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago