ಸವಣೂರು ಪ.ಪೂ.ಕಾಲೇಜಿನಲ್ಲಿ ತಾಲೂಕು ಮಟ್ಟದ ಖೋಖೋ ಪಂದ್ಯಾಟ

August 24, 2019
1:00 PM

ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ  ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group