ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…